ಆನಂದಪುರ: ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಭಾವಪೂರ್ಣ ಶ್ರದ್ಧಾಂಜಲಿ...

ಆನಂದಪುರ: ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದಿಂದ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

ಕನ್ನಡದ ಯುವರತ್ನ ಪವರ್‌ ಸ್ಟಾರ್‌ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ಮರಣದಿಂದ ಇಡೀ ಕರುನಾಡೇ ಇದೀಗ ದುಃಖದಲ್ಲಿ ಮರುಗಿದೆ

ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಕನ್ನಡದ ರಾಜಕುಮಾರನಿಗೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಅಪ್ಪು ಅಭಿಮಾನಿ ಬಳಗದವರು ಬೃಹತ್ ಆಕಾರದ ಕಟೌಟ್ ಗೆ ಹೂವಿನ ಹಾರ ಹಾಕಿ ಬಸ್ ನಿಲ್ದಾಣದ ಆವರಣದಲ್ಲಿ ಮೌನಾಚರಣೆಯೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿ ಅಗಲಿದ ನಾಯಕನಿಗೆ ಕಂಬನಿ ಮಿಡಿದರು.


 ವರದಿ: ಪವನ್ ಕುಮಾರ್ ಕಠಾರೆ

Post a Comment

Previous Post Next Post