ಸಾಗರ: ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದ ಜೋಗ ಕಾರ್ಗಲ್ ಕಂದಾಯ ನಿರೀಕ್ಷಕ ಕೃಷ್ಣಮೂರ್ತಿ ಬಂಧನ.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ನಾಡ ಕಚೇರಿ ಮೇಲೆ ಶಿವಮೊಗ್ಗ ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಿದ್ದು ಕಂದಾಯ ನಿರೀಕ್ಷಕ ಕೃಷ್ಣಮೂರ್ತಿಯನ್ನು ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

ಕಾನೂರು ನಿವಾಸಿ ಹತ್ತಿರ ಕುಟುಂಬದ ಆಸ್ತಿ ಹಿಸ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ಖಾತೆಯನ್ನು ಮಾಡಿಕೊಡಲು ಕೃಷ್ಣಮೂರ್ತಿ 15000 ರೂ  ಲಂಚದ ಬೇಡಿಕೆ ಇಟ್ಟಿದ್ದರು ಇಂದು 8000 ನಗದು ರೂಪದಲ್ಲಿ ಸ್ವೀಕರಿಸುತ್ತಿರುವ ಅಂತಹ ಸಂದರ್ಭದಲ್ಲಿ ಎಸಿಬಿ ಡಿವೈಎಸ್ ಪಿಲೋಕೇಶ್ ಮತ್ತು  ತಂಡ ದಾಳಿ ನಡೆಸಿದ್ದು ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವರದಿ: ಪವನ್ ಕುಮಾರ್ ಕಠಾರೆ.

Post a Comment

Previous Post Next Post