ಸಾಗರ : ಇರುವಕ್ಕಿ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆನೇ ಹಾಸ್ಟೆಲ್ ನಿಂದ ಹೊರ ಬಂದು ಪ್ರತಿಭಟನೆ...



ಸಾಗರ : ಆನಂದಪುರ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಿನ್ಸಿಪಾಲ್ ಹಾಗೂ ಸಹ ಸಿಬ್ಬಂದಿಗಳಿಂದ ಕಿರುಕುಳ ಬೆಳ್ಳಂಬೆಳಿಗ್ಗೆ ಹಾಸ್ಟೆಲ್ ನಿಂದ ಹೊರಬಂದು ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ.


ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ನಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆನೇ ಹಾಸ್ಟೆಲ್ ನಿಂದ ಹೊರ ಬಂದು ಎಡೆಹಳ್ಳಿಯ ಗಣಪತಿ ದೇವಸ್ಥಾನದ ಹತ್ತಿರ ಪ್ರತಿಭಟನೆ ನಡೆಸುತ್ತಿದ್ದಾರೆ.

ಹಾಸ್ಟೆಲ್ ನ ಪ್ರಿನ್ಸಿಪಾಲ್ ಬಿ ಕೆ ಚಂದ್ರಪ್ಪ ಹಾಗೂ ಕೆಲ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಮಾನಸಿಕ ಹಿಂಸೆ ನೀಡುತ್ತಿದ್ದು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಿದ್ದು ಬೂಟುಕಾಲಿನಿಂದ ಒದ್ದು ವಿದ್ಯಾರ್ಥಿಗಳಿಗೆ ಹಿಂಸೆ ನೀಡುತ್ತಿದ್ದಾರೆ ಹಾಗೂ ಊಟದಲ್ಲಿ ಹುಳ ಯುಕ್ತ ಆಹಾರವನ್ನು ವಿದ್ಯಾರ್ಥಿಗಳಿಗೆ ಉಣಬಡಿಸುತ್ತಿದ್ದು ಕೇಳಿದರೆ ವಿದ್ಯಾರ್ಥಿಗಳಿಗೆ ಹೀನಾಮಾನ ಬೈದು ಇಲ್ಲಿಂದ ನಿಮಗೆ ಟಿಸಿ ಕೊಟ್ಟು ಕಳುಹಿಸುತ್ತೇನೆ ನಾವು ಹೇಳಿದ ಹಾಗೆ ಕೇಳುವುದಾದರೆ ಇದೆ ಇಲ್ಲದಿದ್ದರೆ ನಡೆಯಿರಿ ಎಂದು ಇದೀಗ ವಿದ್ಯಾರ್ಥಿಗಳಿಗೆ ಜೀವ ಬೆದರಿಕೆ ಕೂಡ ಹಾಕುತ್ತಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ಹೊರ ಬಂದು ಪ್ರತಿಭಟನೆ ನಡೆಸುತ್ತಿದ್ದಾರೆ.


ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಯಾವುದೇ ವ್ಯವಸ್ಥೆಯೂ ಸಹ ಸರಿಯಿಲ್ಲ ಪ್ರಿನ್ಸಿಪಾಲ್ ನನ್ನು ತಕ್ಷಣ ಅಮಾನತ್ತು ಮಾಡಿ ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.


ವರದಿ : ಪವನ್ ಕುಮಾರ್ ಕಠಾರೆ.

Whats-app group joining link


Post a Comment

Previous Post Next Post