ಶಿವಮೊಗ್ಗ :ಅಪ್ಪು ನಮನ ಕಾರ್ಯಕ್ರಮದಲ್ಲಿದಡಿಯಲ್ಲಿ,ಇಡೀ ಊರಿಗೆ ಅನ್ನಸಂತರ್ಪಣೆ ಮಾಡಿ ಅಭಿಮಾನ ಮೆರೆದ ಗ್ರಾಮಸ್ಥರು!!!!

ಶಿವಮೊಗ್ಗ :ಕರ್ನಾಟಕದ ಅಪ್ಪು ನಮ್ಮನ್ನ ಅಗಲಿ ಈಗಾಗಲೇ ಒಂದೂವರೆ ತಿಂಗಳು ಕಳೆದಿದೆ ಆದರೆ ಅವರ ಸಾಧನೆ ಸಾರ್ಥಕತೆ ಹಾಗೂ ಅವರ ದಾನ ಧರ್ಮದ ಕಾರ್ಯಗಳು ಎಂದು ಕೂಡ ನಮ್ಮ ಹೃದಯದಲ್ಲಿ ಅಚ್ಚಳಿಯದೆ ಉಳಿಯುತ್ತದೆ.

ಕರ್ನಾಟಕದ ದೊಡ್ಮನೆ ಹುಡುಗನ ಹೆಸರಿನಲ್ಲಿ ಇದೀಗ ರಾಜ್ಯಾದ್ಯಂತ ಗಲ್ಲಿಗಲ್ಲಿಗಳಲ್ಲಿ ಸರ್ಕಲ್ ಸರ್ಕಲ್ ಗಳಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಅಪ್ಪು ಹೆಸರನ್ನು ನಾಮಕರಣ ಮಾಡುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಚೆನ್ನಶೆಟ್ಟಿಕೊಪ್ಪ ಗ್ರಾಮದಲ್ಲಿ ಅಪ್ಪು ಅಭಿಮಾನಿಗಳು ಇದೀಗ ಚನ್ನಶೆಟ್ಟಿಕೊಪ್ಪ ವೃತ್ತಕ್ಕೆ ಪುನೀತ್ ರಾಜ್ ಕುಮಾರ್ ವೃತ್ತ ಎಂದು ನಾಮಕರಣ ಮಾಡಿದರು.

ಅಪ್ಪು ಕಣ್ಣು ದಾನ ಮಾಡಿ ಹೇಗೆ ಸಾರ್ಥಕತೆ ಮೆರೆದರೋ ಅದೇ ರೀತಿ ಈ ಗ್ರಾಮದ ಪ್ರತಿಯೊಂದು ಮನೆಯ ಒಬ್ಬ ಸದಸ್ಯರು ಕಡ್ಡಾಯವಾಗಿ ನೇತ್ರದಾನ ಮಾಡಲೇಬೇಕೆಂದು ಪ್ರತಿಜ್ಞೆ ಕೂಡ ಮಾಡಿದ್ದಾರೆ.

ಊರಿನ ಸಾವಿರಾರು ಗ್ರಾಮಸ್ಥರು ಸೇರಿ ಅಪ್ಪುವಿನ ಭಾವಚಿತ್ರದ ಮೆರವಣಿಗೆಯೊಂದಿಗೆ ದೀಪವನ್ನು ಬೆಳಗಿಸಿ ಅದ್ದೂರಿ ಮೆರವಣಿಗೆಯನ್ನು ಕೂಡ ನಡೆಸಿದರು.

ವಿಶೇಷವಾಗಿ ಈ ಊರಿನ ಗ್ರಾಮಸ್ಥರು ಅಪ್ಪುವಿನ ನಮನ ಕಾರ್ಯಕ್ರಮದಲ್ಲಿ ಇಡೀ ಊರೂರಿಗೆ ಬಾಡೂಟವನ್ನು ಬಡಸಿದರು ನಿಜಕ್ಕೂ ಕೂಡ ಇದು  ವಿಶೇಷವಾಗಿತ್ತು. ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರು ಕೂಡಾ ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ವರದಿ: ಪವನ್ ಕುಮಾರ್ ಕಠಾರೆ.

Post a Comment

Previous Post Next Post