ಶಿವಮೊಗ್ಗ : ಯುವಕನ ಬರ್ಬರ ಹತ್ಯೆ,ಭಾರತೀನಗರ ಭುಗಿಲೆದ್ದ ಆಕ್ರೋಶ,

ಶಿವಮೊಗ್ಗ :ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ (26)ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 

ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಮೃತ ಹರ್ಷ ಭಜರಂಗದಳ ಸೇರಿದಂತೆ ಹಾಗೂ ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು,ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ ನಡೆದಿರುವ ಸಾಧ್ಯ ಸಾಧ್ಯತೆಯ ಬಗ್ಗೆ ಪೊಲೀಸರು ತನಿಖೆ ನಂತರವೇ ಬಯಲಾಗಬೇಕಿದೆ .ಈಗಾಗಲೇ ನಗರ ಅತೀ ಸೂಕ್ಷ್ಮ ವಲಯವಾಗಿದ್ದು, ತತ್ತಕ್ಷಣ ಯಾವುದೇ ಕಿಡಿಗೇಡಿ ಕೃತ್ಯಗಳು ಜರುಗದಂತೆ ಮುನ್ನೆಚ್ಚರಿಕೆಯಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ .

Post a Comment

Previous Post Next Post