ಹೊಸನಗರ :ಸಾಗರ ಹೊಸನಗರ ಹೆದ್ದಾರಿಯ ಮಾರುತಿಪುರ ಸಮೀಪ ಕೇಶವಪುರ ಸೇತುವೆ ಬಳಿಯ ತಿರುವಿನಲ್ಲಿ ಗೂಡ್ಸ್ ಆಟೋ ಹಾಗೂ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮ್ನಿಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ನೆಡೆದಿದ್ದು,ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.ಅಫಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಓಮಿನಿಯಲ್ಲಿ ಚಾಲಕನೊಬ್ಬನೇ ಪ್ರಯಾಣ ಮಾಡುತ್ತಿದುದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಗೂಡ್ಸ್ ಆಟೋದಲ್ಲಿ ಇಬ್ಬರು ಪ್ರಯಾಣಿಸುತಿದ್ದು ಸಣ್ಣ ಪುಟ್ಟ ಗಾಯವಾಗಿರುವ ವರದಿಯಾಗಿದ್ದು ,ಹೊಸನಗರದಿಂದ ಬಟ್ಟೆಮಲಪ್ಪ ಕಡೆಗೆ ಪ್ರಯಾಣಿಸುತ್ತಿದ್ದರು.
ಆಗಾಗ ರಾಜ್ಯ ಹೆದ್ದಾರಿಯ ಈ ತಿರುವಿನಲ್ಲಿ ಅಪಘಾತದ ಪ್ರಕರಣಗಳು ಸಂಭವಿಸುತ್ತಿರುವ ವರದಿಯಾಗಿದ್ದು,ಪ್ರಯಾಣ ಮಾಡುವವರು ರಸ್ತೆಯ ಮೇಲೆ ಹೆಚ್ಚಿನ ಗಮನಹರಿಸಿ ಅತೀ ಕಡಿಮೆ ವೇಗದಲ್ಲಿ ಸುರಕ್ಷಿತವಾಗಿ ಪ್ರಯಾಣ ಮಾಡಬೇಕು ಎಂಬುದು ಸ್ಥಳೀಯ ಅಭಿಪ್ರಾಯವಾಗಿದೆ.....
Tags:
ಹೊಸನಗರ