ರಿಪ್ಪನ್ಪೇಟೆ: ಕೋಡೂರಿನ ಮಂದಾರ ಹೋಟೆಲ್ ಇಂದು ಸುಮಾರು ಮಧ್ಯಾಹ್ನ 03 ಗಂಟೆ ಹೊತ್ತಿಗೆ ಎರಡು ಬೈಕ್ ಗಳ ನಡುವೆ ಮುಖಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ನೆಡೆದಿದೆ.
ಮೃತನನ್ನು ಹೆಚ್ ಕುನ್ನೂರು ನಿವಾಸಿ ಶೇಷಪ್ಪ ಎಂದು ಗುರುತಿಸಲಾಗಿದ್ದು. ಕೋಡೂರಿನಿಂದ ಹೊಸನಗರ ಕಡೆ ಹೋಗುವಾಗ ಮಂದಾರ ಹೋಟೆಲ್ ಬಳಿ ಹೊಸನಗರ ಕಡೆಯಿಂದ ರಿಪ್ಪನ್ಪೇಟೆ ಕಡೆಗೆ ತೆರಳುತ್ತಿದ್ದ ಇಬ್ಬರು ಸವಾರರಿದ್ದ ಪಲ್ಸರ್ ಬೈಕ್ ಗುದ್ದಿದ ಪರಿಣಾಮ ಎಕ್ಸ್ಎಲ್ ಬೈಕ್ ನಲ್ಲಿ ತೆರಳುತ್ತಿದ್ದ ಶೇಷಪ್ಪನ ತಲೆಗೆ ಗಂಭೀರ ತರದ ಗಾಯಗಳಾಗಿದ್ದು ಇವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ...
ಗಾಯಾಳುಗಳನ್ನು ಕೆಂಚನಾಲ ನಿವಾಸಿಗಳೆಂದು ತಿಳಿದು ಬಂದಿದ್ದು
ಇಬ್ಬರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದ್ದು.ಹೊಸನಗರ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ....
ಒಂದೇ ಮನೆಯಲ್ಲಿ ವಾರದಲ್ಲೇ ಇಬ್ಬರ ದಾರುಣ ಸಾವು!!
ವಾರದ ಹಿಂದಷ್ಟೇ ಕುನ್ನೂರು ವಾಸಿಯಾದ ಶೇಷಪ್ಪನ ಸಹೋದರ
ಧರ್ಮಪ್ಪ ಸಹ ನಿಟ್ಟೂರು ಸಮೀಪದ ಹೊಳೆಯಲ್ಲಿ ಶವವಾಗಿ ಪತ್ತೆಯಾಗಿದ್ದರು.ಮನೆಯಲ್ಲಿ ಸೂತಕದ ಛಾಯೆ ಕಳೆಯುವ ಒಳಗೆ, ಒಂದೇ ವಾರದಲ್ಲೇ ಮನೆಯ ಮತ್ತೊಬ್ಬರ ಸಾವು ಕುಟುಂಬಕ್ಕೆ ಸಾವಿನ ನೋವಿಗೆ ಬರೆ ಎಳೆದಂತೆ ಆಗಿದೆ...
ಅಪಘಾತ ಸಂಬಂಧಿದಂತೆ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
Tags:
ರಿಪ್ಪನಪೇಟೆ