ಸಾಗರ: ಅದ್ದೂರಿಯಾಗಿ ನಡೆದ ಶ್ರೀನಗರದ ಗಣಪತಿ ವಿಸರ್ಜನೆ ಹಾಗೂ ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ


ಸಾಗರ: ಅದ್ದೂರಿಯಾಗಿ ನಡೆದ ಶ್ರೀನಗರದ ಗಣಪತಿ ವಿಸರ್ಜನೆ ಹಾಗೂ ಗಮನ ಸೆಳೆದ ಬೆಂಕಿಯಾಟ ಪ್ರದರ್ಶನ

ಸಾಗರ ನಗರದ 8ನೇ ವಾರ್ಡ್ ಶ್ರೀನಗರದಲ್ಲಿ  46ನೇ ವರ್ಷದ ಗಣೇಶ ವಿಸರ್ಜನೆ ಮೆರವಣಿಗೆ ಕಾರ್ಯಕ್ರಮ ಗುರುವಾರ  ನಗರದಲ್ಲಿ ಅದ್ದೂರಿಯಾಗಿ ನಡೆಯಿತು...

ಕಳೆದ ಭಾನುವಾರ ಗಣಹೋಮ , ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕ್ರೀಡಾ ಚಟುವಟಿಕೆಯನ್ನ ಶ್ರೀನಗರ ಯುವಜನ ಸಂಘ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿ  ಸಮಿತಿಯವರು ನಡೆಸಿಕೊಟ್ಟರು

ಮನ ಸೆಳೆದ ಬೆಂಕಿಯಾಟ ಪ್ರದರ್ಶನ!!

ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದ ಬೆಂಕಿಯಾಟ ಪ್ರದರ್ಶನ ಕಳೆದ 2 ವರ್ಷ ಕೊರೋನಾ  ಸಾಂಕ್ರಾಮಿಕ ರೋಗದಿಂದ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ ಆದರೆ ಈ ಬಾರಿ ಅದ್ದೂರಿಯಾಗಿ ಬೆಂಕಿಯಾಟ ಪ್ರದರ್ಶನವನ್ನ ಸಾರ್ವಜನಿಕರು ಕಣ್ತುಂಬಿಕೊಂಡರು

ನಗರದ ಹೃದಯಭಾಗ ಸಾಗರ ಹೋಟೆಲ್ ಸರ್ಕಲ್ ಹಾಗೂ ಪೋಲಿಸ್ ಸ್ಟೇಷನ್ ಸರ್ಕಲ್ ನಲ್ಲಿ  ಹಲವು ಜನ ಬೆಂಕಿಯಾಟ ಪ್ರದರ್ಶನವನ್ನು ವೀಕ್ಷಿಸಿದರು...

ಬೆಂಕಿಯಾಟ ಪ್ರದರ್ಶನದಲ್ಲಿ ಎಂ ಜಿ ಚಂದ್ರಕಾಂತ್, ಹರ್ಷ, ದಯಾನಂದ್, ದೀಪು, ಚೇತನ್, ಹೇಮಂತ್,ಮಂಜು, ದಿಗಂತ್,ಅಮಿತ್ ,ಮನೋಜ್ ,ಸೌರವ್, ಕಿರಣ್ ,ಗಂಗಾಧರ್, ಡ್ಯಾನಿ, ಇನ್ನಿತರರು ಉಪಸ್ಥಿತರಿದ್ದರು




✍️✍️-ಸೂರಜ್ ನಾಯರ್

Post a Comment

Previous Post Next Post